ಹುಡುಕಿ :   
ಯಕ್ಷಗಾನ
ಲೇಖನಗಳು
ಸ೦ದರ್ಶನಗಳು
ಸುದ್ದಿ ಜಾಲ
ಸುದ್ದಿ-ಸಮುಚ್ಛಯ
ಸ೦ಘಗಳು
ಪ್ರಸ೦ಗಗಳು
ಪುಸ್ತಕಗಳು
ಮೇಳಗಳು
ಹಾಡುಗಳು
ತಾಳಮದ್ದಲೆ
ದೃಶ್ಯಾವಳಿ
ವ್ಯಕ್ತಿ ವಿಶೇಷ
ಭಾಗವತರು
ಅರ್ಥಧಾರಿಗಳು
ಪುರುಷ ಪಾತ್ರಧಾರಿಗಳು
ಸ್ತ್ರೀ ಪಾತ್ರಧಾರಿಗಳು
ಹಿಮ್ಮೇಳ ವಾದಕರು
ಹಾಸ್ಯಗಾರರು
ತರಬೇತಿ
ನಮ್ಮ ಬಗ್ಗೆ ಮುಖಪುಟ
 
ಸುದ್ದಿ - ಸಮುಚ್ಛಯ
Share
ಜ.9-11: ಸಾಮಗರ ಸಂಸ್ಮರಣ ಯಕ್ಷಗಾನ ಉತ್ಸವ: ಕೊಳ್ಯೂರಿಗೆ ‘ರಾಮದಾಸ ಸಾಮಗ’ ಪ್ರಶಸ್ತಿ

ಲೇಖಕರು :
ಸತೀಶ್ ನಾಯಕ್ , ಪಕಳಕು೦ಜ
ಸೋಮವಾರ, ಜನವರಿ 6 , 2014
ಜನವರಿ 6, 2014

ಜ.9-11: ಸಾಮಗರ ಸಂಸ್ಮರಣ ಯಕ್ಷಗಾನ ಉತ್ಸವ: ಕೊಳ್ಯೂರಿಗೆ ‘ರಾಮದಾಸ ಸಾಮಗ’ ಪ್ರಶಸ್ತಿ

ಉಡುಪಿ : ಉಡುಪಿ ತುಳುಕೂಟದ ವತಿ ಯಿಂದ ಹಿರಿಯ ಯಕ್ಷಗಾನ ಕಲಾವಿದ ದಿ.ಮಲ್ಪೆ ರಾಮದಾಸ ಸಾಮಗರ ನೆನಪಿನಲ್ಲಿ ತುಳು ಯಕ್ಷಗಾನ ಉತ್ಸವವನ್ನು ಜ.9, 10 ಮತ್ತು 11ರಂದು ಉಡುಪಿ ಎಂಜಿಎಂ ಕಾಲೇಜಿನ ಮುದ್ದಣ ಮಂಟಪದಲ್ಲಿ ಆಯೋಜಿಸಲಾಗಿದೆ.

9ರಂದು ಸಂಜೆ 5 ಗಂಟೆಗೆ ಯಕ್ಷಗಾನ ವಿಮ ರ್ಶಕ ಡಾ.ಕೆ.ಎನ್.ರಾಘವ ನಂಬಿಯಾರ್ ಉತ್ಸವವನ್ನು ಉದ್ಘಾಟಿಸಲಿರುವರು. ಮಲ್ಪೆ ರಾಮದಾಸ ಯಕ್ಷಗಾನ ಪ್ರಶಸ್ತಿಯನ್ನು ಹಿರಿಯ ಯಕ್ಷಗಾನ ಕಲಾವಿದ ಡಾ.ಕೊಳ್ಯೂರು ರಾಮಚಂದ್ರ ರಾವ್‌ಗೆ ಇದೇ ಸಂದರ್ಭದಲ್ಲಿ ಪ್ರದಾನ ಮಾಡಲಾಗುವುದು ಎಂದು ಕೂಟದ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದರು.

9ರಂದು ಸಂಜೆ 6ಗಂಟೆಗೆ ಉಡುಪಿ ಶ್ರೀಲಕ್ಷ್ಮೀಜನಾರ್ದನ ಯಕ್ಷಗಾನ ಕಲಾ ಮಂಡಳಿಯಿಂದ ‘ತುಲಸೀ ಜಲಂಧರ’ ಬಡಗುತಿಟ್ಟು ಯಕ್ಷಗಾನ, 10ರಂದು ಸಂಜೆ 6:30ಕ್ಕೆ ‘ಕೋಟಿ ಚೆನ್ನಯೆ’ ತೆಂಕುತಿಟ್ಟು ಯಕ್ಷಗಾನ ತಾಳಮದ್ದಲೆ, 11ರಂದು ಸಂಜೆ 6:30ಕ್ಕೆ ‘ಕೋರ್ದಬ್ಬು’ ತೆಂಕುತಿಟ್ಟು ಯಕ್ಷಗಾನ ಪ್ರದರ್ಶನಗೊಳ್ಳಲಿದೆ ಎಂದವರು ಹೇಳಿದರು. 12ರಂದು ಸಂಜೆ 5:30ಕ್ಕೆ ಕೆಮ್ತೂರು ತುಳುನಾಟಕ ಪ್ರಶಸ್ತಿ ಪ್ರದಾನ ಸಮಾ ರಂಭ ನಡೆಯಲಿದೆ. ಬಳಿಕ ಪ್ರಥಮ ಪ್ರಶಸ್ತಿ ವಿಜೇತ ಮುಂಬೈ ಕರ್ನಾಟಕ ಸಂಘದ ಕಲಾಭಾರತಿ ತಂಡದ ‘ಕೋಮಲ ಗಾಂಧಾರ’ ನಾಟಕದ ಮರುಪ್ರದರ್ಶನ ನಡೆಯಲಿದೆ.

ಗೋಷ್ಠಿಯಲ್ಲಿ ಉತ್ಸವದ ಸಂಚಾಲಕ ತಲ್ಲೂರು ಶಿವರಾಮ ಶೆಟ್ಟಿ, ಕೂಟದ ಕಾರ್ಯದರ್ಶಿ ಗಂಗಾಧರ್, ಕೋಶಾಧಿಕಾರಿ ಎಂ.ಜಿ. ಚೈತನ್ಯ, ಶ್ರೀಧರ ಕೋಳ್ಯೂರು ಉಪಸ್ಥಿತರಿದ್ದರು.

ಕೃಪೆ : http://www.kannada.gulfkannadiga.com

Share





ಈ ಲೇಖನಕ್ಕೆ ನಿಮ್ಮ ಪ್ರತಿಕ್ರಿಯೆ       
Your Name : Your Email :
Your Feedback :
 
ಓದುಗರ ಪ್ರತಿಕ್ರಿಯೆಗಳು
ಈ ಲೇಖನಕ್ಕೆ ಪ್ರತಿಕ್ರಿಯಿಸುವಲ್ಲಿ ನೀವು ಮೊದಲಿಗರಾಗಿ




ಪೂರಕ ಲೇಖನಗಳು
 



ತಾಜಾ ಲೇಖನಗಳು
 
ಇದು ಯಕ್ಷಗಾನ ಕಲೆಯ ಸ೦ಪೂರ್ಣ ಮಾಹಿತಿ ಹಾಗೂ ಪ್ರಸರಣಕ್ಕಾಗಿ ಮೀಸಲಿರುವ ಅ೦ತರ್ಜಾಲ ತಾಣ.
ಇದರಲ್ಲಿ ಪ್ರಕಟವಾಗುವ ಕೆಲವು ಲೇಖನಗಳು ಅ೦ತರ್ಜಾಲದಲ್ಲಿರುವ ಮಾಹಿತಿಗಳಿ೦ದ ಕಲೆಹಾಕಲ್ಪಟ್ಟಿದ್ದು, ಯಾವುದೇ ಕು೦ದು ಕೊರತೆಗಳಿದ್ದಲ್ಲಿ ದಯವಿಟ್ಟು ಸ೦ಪರ್ಕಿಸಿ.
ನಮ್ಮ ಬಗ್ಗೆ  |  ಲೇಖಕರ ಬಳಗ  |  ಸ೦ಪರ್ಕಿಸಿ  |  Font Help
 
© ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ