ಯಕ್ಷಾಂಗಣ ತಾಳಮದ್ದಳೆ ಸಪ್ತಾಹ ಸಮಾರೋಪ
ಲೇಖಕರು : ಸತೀಶ್ ನಾಯಕ್ , ಪಕಳಕು೦ಜ
ಗುರುವಾರ, ನವ೦ಬರ್ 20 , 2014
|
ನವ೦ಬರ್ 20, 2014
|
ಯಕ್ಷಾಂಗಣ ತಾಳಮದ್ದಳೆ ಸಪ್ತಾಹ ಸಮಾರೋಪ
ಮಂಗಳೂರು :
ಯಕ್ಷಾಂಗಣ ಮಂಗಳೂರು ಯಕ್ಷಗಾನ ಚಿಂತನ ಮಂಥನ ಮತ್ತು ಪ್ರದರ್ಶನ ವೇದಿಕೆಯು ಕನ್ನಡ ರಾಜ್ಯೋತ್ಸವದ ಕಲಾ ಸಂಭ್ರಮವಾಗಿ ನಡೆಸುತ್ತಿರುವ ಯಕ್ಷಗಾನ ತಾಳಮದ್ದಳೆ ಸಪ್ತಾಹದ ಮೂಲಕ ನಿಜವಾಗಿಯೂ ಕನ್ನಡ ವಾಙ್ಮಯದ ಅನಾವರಣವಾಗಿದೆ. ನಮಗೆ ಶುದ್ಧ ಕನ್ನಡ ಕೇಳಿ ಬರುವುದು ಯಕ್ಷಗಾನದ ವೇದಿಕೆಯಲ್ಲಿ ಮಾತ್ರ ಎಂದು ಕಟೀಲು ಕ್ಷೇತ್ರದ ಅರ್ಚಕ ಮತ್ತು ಮಕ್ಕಳ ಮೇಳದ ಸಂಚಾಲಕ ವೇ.ಮೂ.ಹರಿನಾರಾಯಣ ಆಸ್ರಣ್ಣ ಹೇಳಿದರು.
ಯಕ್ಷಾಂಗಣ ಮಂಗಳೂರು ಕಲಾ ಸಂಸ್ಥೆ ನಗರದ ವಿಶ್ವವಿದ್ಯಾಲಯದ ಡಾ.ದಯಾನಂದ ಪೈ ಮತ್ತು ಪಿ.ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರ ಹಾಗೂ ಕರ್ನಾಟಕ ಯಕ್ಷಭಾರತಿ ಪುತ್ತೂರು ಸಹಯೋಗ ದೊಂದಿಗೆ ನಗರದ ವಿವಿ ಕಾಲೇಜು ರವೀಂದ್ರ ಕಲಾಭವನದಲ್ಲಿ ಕನ್ನಡ ರಾಜ್ಯೋತ್ಸವ ಕಲಾ ಸಂಭ್ರಮವಾಗಿ ಇತ್ತೀಚೆಗೆ ಏರ್ಪಡಿಸಿದ ದ್ವಿತೀಯ ವರ್ಷದ ಯಕ್ಷಗಾನ ತಾಳಮದ್ದಳೆ ಸಪ್ತಾಹ ಸಮಾರೋಪ ಸಮಾರಂಭದಲ್ಲಿ ಅವರು ಆಶೀರ್ವಚನ ನೀಡಿದರು.
ಹಿರಿಯ ಯಕ್ಷಗಾನ ಕಲಾವಿದ ಪಾತಾಳ ವೆಂಕಟ್ರಮಣ ಭಟ್ ಸಪ್ತಾಹದ ಮಂಗಳ ಜ್ಯೋತಿ ಬೆಳಗಿದರು. ಸಮಾರಂಭದ ಅಂಗವಾಗಿ ಅಗಲಿದ ಪ್ರಸಿದ್ಧ ಯಕ್ಷಗಾನ ಕಲಾವಿದ ಸಿದ್ಧಕಟ್ಟೆ ಚೆನ್ನಪ್ಪ ಶೆಟ್ಟರ ಸಂಸ್ಮರಣೆ ಮತ್ತು ಪ್ರಶಸ್ತಿ ಪ್ರದಾನವನ್ನು ಏರ್ಪಡಿ ಲಾಗಿದ್ದು, ಯಕ್ಷಗಾನ ವಿದ್ವಾಂಸ, ಅರ್ಥಧಾರಿ ಡಾ.ಎಂ.ಪ್ರಭಾಕರ ಜೋಶಿ ಸಂಸ್ಮರಣಾ ಭಾಷಣ ಮಾಡಿದರು.
ಮುಂಬಯಿಯ ಹಿರಿಯ ಭಾಗವತ ಪೊಲ್ಯ ಲಕ್ಷ್ಮೀನಾರಾಯಣ ಶೆಟ್ಟರಿಗೆ ಯಕ್ಷಾಂಗಣದ ಗೌರವಾಧ್ಯಕ್ಷ ಎ.ಜೆ.ಶೆಟ್ಟಿ ಅವರು ಸಿದ್ಧಕಟ್ಟೆ ಚೆನ್ನಪ್ಪ ಶೆಟ್ಟಿ ಪ್ರಶಸ್ತಿ ಪ್ರದಾನ ಮಾಡಿದರು. ಯಕ್ಷಾಂಗಣದ ವತಿಯಿಂದ 10 ಸಾವಿರ ರೂ. ಮತ್ತು ಪ್ರಶಸ್ತಿ ಫಲಕವನ್ನು ವಿತರಿಸಲಾಯಿತು.
ಸಮಾರೋಪ ಸಮಾರಂಭದಲ್ಲಿ ಕರ್ಣಾಟಕ ಬ್ಯಾಂಕಿನ ಆಡಳಿತ ನಿರ್ದೇಶಕ ಪಿ.ಜಯರಾಮ್ ಭಟ್ ಅಧ್ಯಕ್ಷತೆ ವಹಿಸಿದ್ದರು. ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ, ಮುಂಬಯಿಯ ಉದ್ಯಮಿ ಶೇಖರ್ ಆರ್.ಶೆಟ್ಟಿ ಇನ್ನ, ಭೂಮಿ ಧಾರವಾಹಿ ನಿರ್ಮಾಪಕ ನವೀನ್ ಹೆಗ್ಡೆ ಬೆಳುವಾಯಿ, ಹಿರಿಯ ಅರ್ಥದಾರಿ ಕುತ್ಲೋಡಿ ವಾಸು ಶೆಟ್ಟಿ, ಯಕ್ಷಗಾನ ಕೇಂದ್ರದ ನಿರ್ದೇಶಕ ಡಾ.ಕೆ.ಚಿನ್ನಪ್ಪ ಗೌಡ, ನಮ್ಮ ಕುಡ್ಲದ ನಿರ್ದೇಶಕ ಲೀಲಾಕ್ಷ ಬಿ.ಕರ್ಕೇರ ಉಪಸ್ಥಿತರಿದ್ದರು.
ಯಕ್ಷಾಂಗಣದ ಪದಾಧಿಕಾರಿಗಳಾದ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು ಹರೇಕಳ, ಎ.ಶಿವಾನಂದ ಕರ್ಕೇರ, ಹರೀಶ್ ಶೆಟ್ಟಿ ಸೂಡ, ವಕ್ವಾಡಿ ಶೇಖರ ಶೆಟ್ಟಿ, ಕೆ.ಲಕ್ಷ್ಮೀನಾರಾಯಣ ರೈ ಹರೇಕಳ, ಡಾ.ದಿನಕರ ಎಸ್.ಪಚ್ಚನಾಡಿ, ಶರತ್ಕುಮಾರ್ ಕದ್ರಿ, ಕೆ.ರವೀಂದ್ರ ರೈ ಹರೇಕಳ, ಎಂ.ಜೆ.ರಾವ್, ಮಲ್ಲಕಾ ಎಸ್. ಭಂಡಾರಿ ಸಹಕರಿಸಿದರು. ಯಕ್ಷಾಂಗಣದ ಕಾರ್ಯಾಧ್ಯಕ್ಷ ಭಾಸ್ಕರ ರೈ ಕುಕ್ಕುವಳ್ಳಿ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ತೋನ್ಸೆ ಪುಷ್ಕಳ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ನಿವೇದಿತ ಎನ್.ಶೆಟ್ಟಿ ಸನ್ಮಾನ ಫಲಕ ವಾಚಿಸಿದರು. ಸುಧಾಕರ ರಾವ್ ಪೇಜಾವರ ವಂದಿಸಿದರು.
ಕೃಪೆ :
http://www.vijaykarnataka.com
|
|
|