ಹುಡುಕಿ :   
ಯಕ್ಷಗಾನ
ಲೇಖನಗಳು
ಸ೦ದರ್ಶನಗಳು
ಸುದ್ದಿ ಜಾಲ
ಸುದ್ದಿ-ಸಮುಚ್ಛಯ
ಸ೦ಘಗಳು
ಪ್ರಸ೦ಗಗಳು
ಪುಸ್ತಕಗಳು
ಮೇಳಗಳು
ಹಾಡುಗಳು
ತಾಳಮದ್ದಲೆ
ದೃಶ್ಯಾವಳಿ
ವ್ಯಕ್ತಿ ವಿಶೇಷ
ಭಾಗವತರು
ಅರ್ಥಧಾರಿಗಳು
ಪುರುಷ ಪಾತ್ರಧಾರಿಗಳು
ಸ್ತ್ರೀ ಪಾತ್ರಧಾರಿಗಳು
ಹಿಮ್ಮೇಳ ವಾದಕರು
ಹಾಸ್ಯಗಾರರು
ತರಬೇತಿ
ನಮ್ಮ ಬಗ್ಗೆ ಮುಖಪುಟ
 
ಸುದ್ದಿ - ಸಮುಚ್ಛಯ
Share
ಭಾಸ್ಕರ ಜೋಶಿ ಶಿರಳಗಿ ಅವರಿಗೆ ಪಾತಾಳ ಪ್ರಶಸ್ತಿ

ಲೇಖಕರು : ಉದಯವಾಣಿ
ಬುಧವಾರ, ಡಿಸೆ೦ಬರ್ 3 , 2014
ಡಿಸೆ೦ಬರ್ 3, 2014

ಭಾಸ್ಕರ ಜೋಶಿ ಶಿರಳಗಿ ಅವರಿಗೆ ಪಾತಾಳ ಪ್ರಶಸ್ತಿ

ಮಂಗಳೂರು : ಎಡನೀರು ಪಾತಾಳ ಯಕ್ಷ ಪ್ರತಿಷ್ಠಾನದ ವತಿಯಿಂದ ನೀಡುವ ಪಾತಾಳ ಪ್ರಶಸ್ತಿಗೆ ಹಿರಿಯ ಸ್ತ್ರೀ ಪಾತ್ರಧಾರಿ ಭಾಸ್ಕರ ಜೋಶಿ ಶಿರಳಗಿ ಆಯ್ಕೆಯಾಗಿದ್ದಾರೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಹರಿಕೃಷ್ಣ ಪುನರೂರು ತಿಳಿಸಿದ್ದಾರೆ.

ಡಿ. 7ರಂದು ರಾತ್ರಿ 7 ಗಂಟೆಗೆ ಕಾಸರಗೋಡು ಶ್ರೀ ಎಡನೀರು ಮಠದ ಕೃಷ್ಣ ಸಭಾಭವನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. 10,000 ರೂ. ನಗದು ಹಾಗೂ ಪ್ರಶಸ್ತಿ ಪತ್ರ ನೀಡಲಾಗುವುದು ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ಮಂಗಳವಾರ ವಿವರಿಸಿದರು.

ಪಾತಾಳ ಪ್ರಶಸ್ತಿಗೆ ಈಗ ದಶಮಾನೋತ್ಸವದ ಸಂಭ್ರಮ. ಈ ಹಿನ್ನೆಲೆಯಲ್ಲಿ ಅಂಕಣಕಾರ ನಾ. ಕಾರಂತ ಪೆರಾಜೆ ಅವರ ಸಂಪಾದಕತ್ವದ 'ಉಪಾಯನ' ಕೃತಿಯನ್ನು ಪ್ರತಿಷ್ಠಾನ ಪ್ರಕಾಶಿಸಿದ್ದು, ಎಡನೀರು ಮಠಾಧೀಶ ಶ್ರೀ ಕೇಶವಾನಂದ ಭಾರತೀ ಸ್ವಾಮೀಜಿ ಕೃತಿ ಅನಾವರಣಗೊಳಿಸಲಿದ್ದಾರೆ. ಬಳಿಕ ಶ್ರೀ ಎಡನೀರು ಮೇಳದವರಿಂದ 'ಬೀಷ್ಮಾಭಿದಾನ-ಮೈಂದದ್ವಿವಿದ' ಯಕ್ಷಗಾನ ಬಯಲಾಟ ಜರಗಲಿದೆ ಎಂದು ಅವರು ತಿಳಿಸಿದರು.

ಮಹಾಲಿಂಗ ಭಟ್‌, ಶ್ರೀರಾಮ ಪಾತಾಳ್‌ ಉಪಸ್ಥಿತರಿದ್ದರು.



ಕೃಪೆ : http://www.udayavani.com


Share





ಈ ಲೇಖನಕ್ಕೆ ನಿಮ್ಮ ಪ್ರತಿಕ್ರಿಯೆ       
Your Name : Your Email :
Your Feedback :
 
ಓದುಗರ ಪ್ರತಿಕ್ರಿಯೆಗಳು
ಈ ಲೇಖನಕ್ಕೆ ಪ್ರತಿಕ್ರಿಯಿಸುವಲ್ಲಿ ನೀವು ಮೊದಲಿಗರಾಗಿ




ಪೂರಕ ಲೇಖನಗಳು
 



ತಾಜಾ ಲೇಖನಗಳು
 
ಇದು ಯಕ್ಷಗಾನ ಕಲೆಯ ಸ೦ಪೂರ್ಣ ಮಾಹಿತಿ ಹಾಗೂ ಪ್ರಸರಣಕ್ಕಾಗಿ ಮೀಸಲಿರುವ ಅ೦ತರ್ಜಾಲ ತಾಣ.
ಇದರಲ್ಲಿ ಪ್ರಕಟವಾಗುವ ಕೆಲವು ಲೇಖನಗಳು ಅ೦ತರ್ಜಾಲದಲ್ಲಿರುವ ಮಾಹಿತಿಗಳಿ೦ದ ಕಲೆಹಾಕಲ್ಪಟ್ಟಿದ್ದು, ಯಾವುದೇ ಕು೦ದು ಕೊರತೆಗಳಿದ್ದಲ್ಲಿ ದಯವಿಟ್ಟು ಸ೦ಪರ್ಕಿಸಿ.
ನಮ್ಮ ಬಗ್ಗೆ  |  ಲೇಖಕರ ಬಳಗ  |  ಸ೦ಪರ್ಕಿಸಿ  |  Font Help
 
© ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ