ಹುಡುಕಿ :   
ಯಕ್ಷಗಾನ
ಲೇಖನಗಳು
ಸ೦ದರ್ಶನಗಳು
ಸುದ್ದಿ ಜಾಲ
ಸುದ್ದಿ-ಸಮುಚ್ಛಯ
ಸ೦ಘಗಳು
ಪ್ರಸ೦ಗಗಳು
ಪುಸ್ತಕಗಳು
ಮೇಳಗಳು
ಹಾಡುಗಳು
ತಾಳಮದ್ದಲೆ
ದೃಶ್ಯಾವಳಿ
ವ್ಯಕ್ತಿ ವಿಶೇಷ
ಭಾಗವತರು
ಅರ್ಥಧಾರಿಗಳು
ಪುರುಷ ಪಾತ್ರಧಾರಿಗಳು
ಸ್ತ್ರೀ ಪಾತ್ರಧಾರಿಗಳು
ಹಿಮ್ಮೇಳ ವಾದಕರು
ಹಾಸ್ಯಗಾರರು
ತರಬೇತಿ
ನಮ್ಮ ಬಗ್ಗೆ ಮುಖಪುಟ
 
ಸುದ್ದಿ - ಸಮುಚ್ಛಯ
Share
ಮೂಡಂಬೈಲು ಗೋಪಾಲಕೃಷ್ಣ ಶಾಸ್ತ್ರಿಗೆ ಕೀರಿಕ್ಕಾಡು ಪ್ರಶಸ್ತಿ

ಲೇಖಕರು :
ಸತೀಶ್ ನಾಯಕ್ , ಪಕಳಕು೦ಜ
ಮ೦ಗಳವಾರ, ಡಿಸೆ೦ಬರ್ 23 , 2014
ಡಿಸೆ೦ಬರ್ 23, 2014

ಮೂಡಂಬೈಲು ಗೋಪಾಲಕೃಷ್ಣ ಶಾಸ್ತ್ರಿಗೆ ಕೀರಿಕ್ಕಾಡು ಪ್ರಶಸ್ತಿ

ಸುಳ್ಯ : ದೇಲಂಪಾಡಿ ಬನಾರಿ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಕಲಾ ಸಂಘದ 70ನೇ ವಾರ್ಷಿ ಕೋತ್ಸವ ಹಾಗೂ ಸಂಘದ ಸಂಸ್ಥಾಪಕ ಕೀರಿಕ್ಕಾಡು ವಿಷ್ಣು ಭಟ್ಟರ ಜನ್ಮ ಶತಮಾನೋತ್ಸವ ಕಾರ್ಯಕ್ರಮ ಡಿ. 26ರಂದು ಕೀರಿಕ್ಕಾಡು ಸ್ಮಾರಕ ಭವನದಲ್ಲಿ ನಡೆಯಲಿದೆ ಎಂದು ಸಂಘದ ಕಾರ್ಯದರ್ಶಿ ಕೀರಿಕ್ಕಾಡು ವಿಶ್ವವಿನೋದ ಬನಾರಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಅಂದು ಸಂಜೆ ಕಾರ್ಯಕ್ರಮ ಆರಂಭವಾಗ ಲಿದೆ. ಯೋಗ ಸಾಧಕ ಗೋಪಾಲಕೃಷ್ಣ ದೇಲಂಪಾಡಿ ಅಧ್ಯಕ್ಷತೆ ವಹಿಸಲಿದ್ದು, ಹಿರಿಯ ಕಲಾವಿದ ಕೆ.ಸಿ. ಪಾಟಾಳಿ ಸಂಸ್ಮರಣಾ ಭಾಷಣ ಮಾಡಲಿದ್ದಾರೆ. ಹಿರಿಯ ಯಕ್ಷಗಾನ ಅರ್ಥಧಾರಿ ಮೂಡಂಬೈಲು ಗೋಪಾಲಕೃಷ್ಣ ಶಾಸ್ತ್ರಿ ಅವರಿಗೆ ಕೀರಿಕ್ಕಾಡು ಪ್ರಶಸ್ತಿ ನೀಡಲಾಗುವುದು.

ಸುಳ್ಯ ಪ್ರತಿಭಾ ವಿದ್ಯಾಲಯದ ಪ್ರಿನ್ಸಿಪಾಲ್ ವೆಂಕಟರಾಮ ಭಟ್ ಅಭಿನಂದನೆ ಭಾಷಣ ಮಾಡಲಿದ್ದಾರೆ. ಸಂಘದ ಹಿರಿಯ ಸದಸ್ಯ ಕಲ್ಲಡ್ಕ ಲಕ್ಷ್ಮೀನಾರಾಯಣ ಕಲ್ಲೂರಾಯ ಅವರನ್ನು ಗೌರವಿಸಲಾಗುತ್ತದೆ.

ಹಿರಿಯ ಸಹಕಾರಿ ಧುರೀಣ ಊಜಂಪಾಡಿ ನಾರಾಯಣ ನಾಯ್ಕ್, ಪೈವಳಿಕೆ ಬೆನಕ ಯಕ್ಷ ಕಲಾ ವೇದಿಕೆ ಅಧ್ಯಕ್ಷ ದೇವಕಾನ ಕೃಷ್ಣ ಭಟ್ ಅತಿಥಿಗಳಾಗಿ ಭಾಗವಹಿ ಸಲಿದ್ದಾರೆ. ಬಳಿಕ 'ಕೃಷ್ಣಾರ್ಜುನ' ಯಕ್ಷಗಾನ ತಾಳಮದ್ದಳೆ, ಖಂಡಿಗೆಮೂಲೆ ಯಕ್ಷಸಿರಿ ಕಲಾ ವೇದಿಕೆ ಸದಸ್ಯರಿಂದ 'ಶ್ರೀರಾಮ ದರ್ಶನ' ಯಕ್ಷಗಾನ ಬಯಲಾಟ ಹಾಗೂ ಅತಿಥಿ ಕಲಾವಿದರಿಂದ 'ದಕ್ಷಾಧ್ವರ' ಬಯಲಾಟ ನಡೆಯಲಿದೆ ಎಂದು ತಿಳಿಸಿದರು.



ಕೃಪೆ : http://vijaykarnataka.com


Share





ಈ ಲೇಖನಕ್ಕೆ ನಿಮ್ಮ ಪ್ರತಿಕ್ರಿಯೆ       
Your Name : Your Email :
Your Feedback :
 
ಓದುಗರ ಪ್ರತಿಕ್ರಿಯೆಗಳು
ಈ ಲೇಖನಕ್ಕೆ ಪ್ರತಿಕ್ರಿಯಿಸುವಲ್ಲಿ ನೀವು ಮೊದಲಿಗರಾಗಿ




ಪೂರಕ ಲೇಖನಗಳು
 



ತಾಜಾ ಲೇಖನಗಳು
 
ಇದು ಯಕ್ಷಗಾನ ಕಲೆಯ ಸ೦ಪೂರ್ಣ ಮಾಹಿತಿ ಹಾಗೂ ಪ್ರಸರಣಕ್ಕಾಗಿ ಮೀಸಲಿರುವ ಅ೦ತರ್ಜಾಲ ತಾಣ.
ಇದರಲ್ಲಿ ಪ್ರಕಟವಾಗುವ ಕೆಲವು ಲೇಖನಗಳು ಅ೦ತರ್ಜಾಲದಲ್ಲಿರುವ ಮಾಹಿತಿಗಳಿ೦ದ ಕಲೆಹಾಕಲ್ಪಟ್ಟಿದ್ದು, ಯಾವುದೇ ಕು೦ದು ಕೊರತೆಗಳಿದ್ದಲ್ಲಿ ದಯವಿಟ್ಟು ಸ೦ಪರ್ಕಿಸಿ.
ನಮ್ಮ ಬಗ್ಗೆ  |  ಲೇಖಕರ ಬಳಗ  |  ಸ೦ಪರ್ಕಿಸಿ  |  Font Help
 
© ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ