ಹುಡುಕಿ :   
ಯಕ್ಷಗಾನ
ಲೇಖನಗಳು
ಸ೦ದರ್ಶನಗಳು
ಸುದ್ದಿ ಜಾಲ
ಸುದ್ದಿ-ಸಮುಚ್ಛಯ
ಸ೦ಘಗಳು
ಪ್ರಸ೦ಗಗಳು
ಪುಸ್ತಕಗಳು
ಮೇಳಗಳು
ಹಾಡುಗಳು
ತಾಳಮದ್ದಲೆ
ದೃಶ್ಯಾವಳಿ
ವ್ಯಕ್ತಿ ವಿಶೇಷ
ಭಾಗವತರು
ಅರ್ಥಧಾರಿಗಳು
ಪುರುಷ ಪಾತ್ರಧಾರಿಗಳು
ಸ್ತ್ರೀ ಪಾತ್ರಧಾರಿಗಳು
ಹಿಮ್ಮೇಳ ವಾದಕರು
ಹಾಸ್ಯಗಾರರು
ತರಬೇತಿ
ನಮ್ಮ ಬಗ್ಗೆ ಮುಖಪುಟ
 
ಸುದ್ದಿ - ಸಮುಚ್ಛಯ
Share
ಸಾಧಕರನ್ನು ಸನ್ಮಾನಿಸುವುದು ನಾಗರಿಕ ಸಮಾಜದ ಕರ್ತವ್ಯ : ಉದಯಕುಮಾರ ಶೆಟ್ಟಿ

ಲೇಖಕರು :
ಸತೀಶ್ ನಾಯಕ್ , ಪಕಳಕು೦ಜ
ಶನಿವಾರ, ಫೆಬ್ರವರಿ 21 , 2015
ಫೆಬ್ರವರಿ 21, 2015

ಸಾಧಕರನ್ನು ಸನ್ಮಾನಿಸುವುದು ನಾಗರಿಕ ಸಮಾಜದ ಕರ್ತವ್ಯ : ಉದಯಕುಮಾರ ಶೆಟ್ಟಿ

ಚೆಗ್ರಿಬೆಟ್ಟು : ಸಮಾಜದಲ್ಲಿ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸುವುದು ನಾಗರಿಕ ಸಮಾಜದ ಕರ್ತವ್ಯ. ಇದರಿಂದ ಅವಮಾನ ಅನುಮಾನಗಳನ್ನು ಸಹಿಸಿಕೊಂಡು ಸಾಧನೆ ಮಾಡಿದ ಸಾಧಕರಿಗೆ ನೆಮ್ಮದಿ ದೊರೆತು ಇನ್ನಷ್ಟು ಸಾಧನೆ ಮಾಡಲು ಪ್ರೇರಣೆ ದೊರೆಯುತ್ತದೆ ಎಂದು ಯಕ್ಷಗಾನ ಬಯಲಾಟ ಅಕಾಡೆಮಿ ಪ್ರಶಸ್ತಿ ಪುರಸ್ಕ್ರತ ಪ್ರೋ. ಎಸ್. ವಿ. ಉದಯಕುಮಾರ ಶೆಟ್ಟಿಯವರು ಹೇಳಿದರು.

ಅವರು ಚೆಗ್ರಿಬೆಟ್ಟಿನ ನಾಗರಿಕರು ಶ್ರೀ ಮಡಾಮಕ್ಕಿ ಮೇಳದ ವೇದಿಕೆಯಲ್ಲಿ ಪಂಚಮೇಳಗಳ ಯಜಮಾನ ಪಿ. ಕಿಶನ್ ಹೆಗ್ಡೆ, ಹವ್ಯಾಸಿ ಕಲಾವಿದ ಸುರೇಶ ಆಚಾರ್ಯ, ಪ್ರಸಂಗಕರ್ತ ಹಂದಿಗದ್ದೆ ಸುರೇಶ ಕುಲಾಲ್ ಹಾಗೂ ಸುಮಾರು 80 ಯಕ್ಷ ನೃತ್ಯ ಕಾರ್ಯಕ್ರಮ ನೀಡಿದ 9 ವರ್ಷ ಪ್ರಾಯದ ಬಾಲಕಿ ಕು. ರಶ್ಮಿತಾ ಇವರ ಸನ್ಮಾನ ಕಾರ್ಯಕ್ರಮದಲ್ಲಿ ಸನ್ಮಾನಿತರನ್ನು‌ ಅಭಿನಂದಿಸಿ ಮಾತನಾಡಿದರು.

ಸೂರಾಲು ಕ್ಷೇತ್ರದ ಅರ್ಚಕ ಕೆ. ಸೀತಾರಾಮ ಅಡಿಗರು ಸನ್ಮಾನ ಕಾರ್ಯಕ್ರಮ ನೆಡಿಸಿಕೊಟ್ಟರು. ಮಡಾಮಕ್ಕಿ ಕ್ಷೇತ್ರದ ಆಡಳಿತ ಮುಕ್ತೇಸರ ಎಂ. ಶಶಿಧರ ಶೆಟ್ಟಿ ಅಧ್ಯಕ್ಷತೆವಹಿಸಿದ್ದರು. ಮುಖ್ಯ ಅತಿಥಿಗಳಾಗಿ ನಿವೃತ್ತ ಬ್ಯಾಂಕ್ ಅಧಿಕಾರಿ ವೆಂಕಟೇಶ ನಾಯಕ್ ಆಗಮಿಸಿದ್ದರು. 50ನೇ ಪ್ರಯೋಗವಾಗುತ್ತಿರುವ ಸುರೇಶ ಕುಲಾಲರ ``ದೈವಸಂಕಲ್ಪ`` ಎಂಬ ಪ್ರಸಂಗದ ಸುವರ್ಣೋತ್ಸವದ ಪ್ರಯುಕ್ತ ಕಲಾವಿದರಿಗೆ ಸ್ಮರಣಿಕೆ ನೀಡಿ ಸಭೆಗೆ ಸಿಹಿ ಹಂಚಿ ಸಂಭ್ರಮಿಸಲಾಯಿತು. ಕಾರ್ಯಕ್ರಮದ ಸಂಯ್ಯೋಜಕ ಚೆಗ್ರಿಬೆಟ್ಟಿನ ಉದ್ಯಮಿ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಮೇಳದ ಕಲಾವಿದರಿಂದ ``ದೈವ ಸಂಕಲ್ಪ`` ಪ್ರಸಂಗದ 50ನೇ ಪ್ರಯೋಗ ಪ್ರದರ್ಶನಗೊಂಡಿತು.












Share





ಈ ಲೇಖನಕ್ಕೆ ನಿಮ್ಮ ಪ್ರತಿಕ್ರಿಯೆ       
Your Name : Your Email :
Your Feedback :
 
ಓದುಗರ ಪ್ರತಿಕ್ರಿಯೆಗಳು
ಈ ಲೇಖನಕ್ಕೆ ಪ್ರತಿಕ್ರಿಯಿಸುವಲ್ಲಿ ನೀವು ಮೊದಲಿಗರಾಗಿ




ಪೂರಕ ಲೇಖನಗಳು
 



ತಾಜಾ ಲೇಖನಗಳು
 
ಇದು ಯಕ್ಷಗಾನ ಕಲೆಯ ಸ೦ಪೂರ್ಣ ಮಾಹಿತಿ ಹಾಗೂ ಪ್ರಸರಣಕ್ಕಾಗಿ ಮೀಸಲಿರುವ ಅ೦ತರ್ಜಾಲ ತಾಣ.
ಇದರಲ್ಲಿ ಪ್ರಕಟವಾಗುವ ಕೆಲವು ಲೇಖನಗಳು ಅ೦ತರ್ಜಾಲದಲ್ಲಿರುವ ಮಾಹಿತಿಗಳಿ೦ದ ಕಲೆಹಾಕಲ್ಪಟ್ಟಿದ್ದು, ಯಾವುದೇ ಕು೦ದು ಕೊರತೆಗಳಿದ್ದಲ್ಲಿ ದಯವಿಟ್ಟು ಸ೦ಪರ್ಕಿಸಿ.
ನಮ್ಮ ಬಗ್ಗೆ  |  ಲೇಖಕರ ಬಳಗ  |  ಸ೦ಪರ್ಕಿಸಿ  |  Font Help
 
© ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ