ಪ್ರೋ. ಎಸ್. ವಿ. ಉದಯಕುಮಾರ ಶೆಟ್ಟರಿಗೆ ಪ್ರತಿಷ್ಟಿತ ಕರ್ನಾಟಕ ಯಕ್ಷಗಾನ ಅಕಾಡೆಮಿ ಪ್ರಶಸ್ತಿ
ಲೇಖಕರು : ಸತೀಶ್ ನಾಯಕ್ , ಪಕಳಕು೦ಜ
ಮ೦ಗಳವಾರ, ಮಾರ್ಚ್ 3 , 2015
|
ಮಾರ್ಚ್ 3, 2015
|
ಪ್ರೋ. ಎಸ್. ವಿ. ಉದಯಕುಮಾರ ಶೆಟ್ಟರಿಗೆ ಪ್ರತಿಷ್ಟಿತ ಕರ್ನಾಟಕ ಯಕ್ಷಗಾನ ಅಕಾಡೆಮಿ ಪ್ರಶಸ್ತಿ
ಕುಂದಾಪುರ :
ಯಕ್ಷಗಾನ ಕ್ಷೇತ್ರದ ಶ್ರೇಷ್ಟ ಚಿಂತಕ, ವಾಗ್ಮಿ, ಯಕ್ಷಗಾನ ವಿಮರ್ಶಕ, ಭಾಗವತರಾಗಿ ಬಹುಮುಖ ಪ್ರತಿಭೆಯ ಮಣಿಪಾಲ ಎಂ. ಐ. ಟಿ ಇಂಜಿನೀಯರಿಂಗ್ ಕಾಲೇಜಿನ ಪ್ರಾದ್ಯಾಪಕ ಪ್ರೊ. ಎಸ್. ವಿ. ಉದಯಕುಮಾರ ಶೆಟ್ಟರಿಗೆ ಕರ್ನಾಟಕ ಸರ್ಕಾರ ನೀಡುವ ಯಕ್ಷಗಾನ ಅಕಾಡೆಮಿ ಪ್ರಶಸ್ತಿಯನ್ನು ಕರ್ನಾಟಕ ಸರ್ಕಾರದ ಮಾನ್ಯ ಕನ್ನಡ ಮತ್ತು ಸಂಸ್ಕ್ರತಿ ಸಚಿವೆ ಉಮಾಶ್ರೀಯವರು ಫ಼ೆಬ್ರವರಿ 26ರಂದು ಸಾಲಿಗ್ರಾಮದಲ್ಲಿ ನಡೆದ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭಲ್ಲಿ ಪ್ರದಾನ ಮಾಡಿದರು.
ಅಕಾಡೆಮಿ ಅದ್ಯಕ್ಷ ಭೆಳಗಲ್ಲು ವೀರಣ್ಣ ಅದ್ಯಕ್ಷತೆ ವಹಿಸಿದ್ದರು. ಮಾಜಿ ಸಂಸದ ಕೆ. ಜಯಪ್ರಕಾಶ ಹೆಗ್ಡೆ, ಹಿರಿಯ ಪತ್ರಕರ್ತ ಎ. ಈಶ್ವರಯ್ಯ ಮುಂತಾದ ಗಣ್ಯರು ಉಪಸ್ಥಿತರಿದ್ದರು. ಸಾಲಿಗ್ರಾಮ ಮೇಳದ ಯಜಮಾನ ಪಿ. ಕಿಶನ್ ಹೆಗ್ಡೆ ಪ್ರಶಸ್ತಿ ಪುರಸ್ಕ್ರತರನ್ನು ಪರಿಚಯಿಸಿದರು. ಪ್ರಶಸ್ತಿಯು ಹತ್ತು ಸಾವಿರ ನಗದು ಸಹಿತ ಪ್ರಶಸ್ತಿ ಪಲಕ, ಸ್ಮರಣಿಕೆಯನ್ನೊಳಗೊಂಡಿದೆ.
|
|
|