ಬಂಟ್ವಾಳರಿಗೆ ಸರ್ಪಂಗಳ ಪ್ರಶಸ್ತಿ ಪ್ರದಾನ
ಲೇಖಕರು : ಸತೀಶ್ ನಾಯಕ್ , ಪಕಳಕು೦ಜ
ಮ೦ಗಳವಾರ, ಆಗಸ್ಟ್ 11 , 2015
|
ಆಗಸ್ಟ್ 11, 2015
|
ಬಂಟ್ವಾಳರಿಗೆ ಸರ್ಪಂಗಳ ಪ್ರಶಸ್ತಿ ಪ್ರದಾನ
ಉಡುಪಿ :
ಪರ್ಯಾಯ ಕಾಣಿಯೂರು ಮಠಾಧೀಶ ಶ್ರೀ ವಿದ್ಯಾವಲ್ಲಭತೀರ್ಥ ಶ್ರೀಪಾದರು ಪ್ರಶಸ್ತಿ ಪ್ರದಾನ ಮಾಡಿದರು. ಯಕ್ಷಗಾನ ಕಲಾರಂಗದ ನಿಕಟಪೂರ್ವ ಅಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ ಉಪಸ್ಥಿತರಿದ್ದರು.
ಪ್ರಶಸ್ತಿ ಸ್ವೀಕರಿಸಿ ಜಯರಾಮ ಆಚಾರ್ಯ ಕೃತಜ್ಞತೆ ಸಲ್ಲಿಸಿದರು. ಈ ಸಂದರ್ಭ ನಳಿನಿ ಸುಬ್ರಹ್ಮಣ್ಯ ಭಟ್, ಡಾ. ಶೈಲಜಾ ಭಟ್, ಜೈದೀಪ್ ಎಸ್. ಕುಮಾರ ಅನಿರುದ್ಧ್ , ಆವಂತಿಕಾ ಉಪಸ್ಥಿತರಿದ್ದರು.
ಸನ್ಮಾನ ಪತ್ರವನ್ನು ನಾರಾಯಣ ಎಂ. ಹೆಗಡೆ ವಾಚಿಸಿದರು. ಮುರಲಿ ಕಡೆಕಾರ್ ನಿರೂಪಿಸಿದರು. ಬಳಿಕ ಸುದರ್ಶನ ವಿಜಯ ಹಾಗೂ ಶೂರ್ಪನಖಾ ವಿವಾಹ ಯಕ್ಷಗಾನ ಪ್ರದರ್ಶನ ನಡೆಯಿತು.
ಕೃಪೆ :
vijaykarnataka.com
|
|
|