ಹುಡುಕಿ :   
ಯಕ್ಷಗಾನ
ಲೇಖನಗಳು
ಸ೦ದರ್ಶನಗಳು
ಸುದ್ದಿ ಜಾಲ
ಸುದ್ದಿ-ಸಮುಚ್ಛಯ
ಸ೦ಘಗಳು
ಪ್ರಸ೦ಗಗಳು
ಪುಸ್ತಕಗಳು
ಮೇಳಗಳು
ಹಾಡುಗಳು
ತಾಳಮದ್ದಲೆ
ದೃಶ್ಯಾವಳಿ
ವ್ಯಕ್ತಿ ವಿಶೇಷ
ಭಾಗವತರು
ಅರ್ಥಧಾರಿಗಳು
ಪುರುಷ ಪಾತ್ರಧಾರಿಗಳು
ಸ್ತ್ರೀ ಪಾತ್ರಧಾರಿಗಳು
ಹಿಮ್ಮೇಳ ವಾದಕರು
ಹಾಸ್ಯಗಾರರು
ತರಬೇತಿ
ನಮ್ಮ ಬಗ್ಗೆ ಮುಖಪುಟ
 
ಸುದ್ದಿ - ಸಮುಚ್ಛಯ
Share
ಮೂಡಂಬೈಲು ಗೋಪಾಲಕೃಷ್ಣ ಶಾಸ್ತ್ರಿರವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ

ಲೇಖಕರು :
ಸತೀಶ್ ನಾಯಕ್ , ಪಕಳಕು೦ಜ
ಭಾನುವಾರ, ನವ೦ಬರ್ 1 , 2015
ನವೆ೦ಬರ್ 1, 2015

ಮೂಡಂಬೈಲು ಗೋಪಾಲಕೃಷ್ಣ ಶಾಸ್ತ್ರಿರವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ

ಪುತ್ತೂರು : ಯಕ್ಷಗಾನ ತಾಳಮದ್ದಳೆ ಕ್ಷೇತ್ರದ ಸಾಧನೆಗಾಗಿ ಪುಣಚ ಮೂಡಂಬೈಲು ಗೋಪಾಲಕೃಷ್ಣ ಶಾಸ್ತ್ರಿರವರು 2015ನೇ ಸಾಲಿನ ರಾಜ್ಯ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ರಾಜ್ಯ ಸರಕಾರವು ವಿವಿಧ ಕ್ಷೇತ್ರದ ಸಾಧಕರನ್ನು ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಮಾಡಿದ್ದು ದಕ್ಷಿಣ ಕನ್ನಡ ಜಿಲ್ಲೆಯಿಂದ ಮೂಡಂಬೈಲು ಶಾಸ್ತ್ರಿರವರನ್ನು ಪ್ರಶಸ್ತಿಗೆ ಆಯ್ಕೆಮಾಡಿದ್ದು, ನ. 1ರಂದು ಬೆಂಗಳೂರಿನಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.

ತಾಳಮದ್ದಳೆಗಳಲ್ಲಿ ರಾಮ, ಕೃಷ್ಣ, ಧರ್ಮರಾಯ, ಅರ್ಜುನ, ಭೀಮ, ಹನುಮಂತ, ಕರ್ಣ, ಭೀಷ್ಮ, ತಾಮ್ರಧ್ವಜ ಮೊದಲಾದ ಪುರುಷ ಪಾತ್ರಗಳು, ಅಂಬೆ, ಮಂಡೋದರಿ, ಕೈಕೆ, ಸೀತೆ, ದಾಕ್ಷಾಯಣಿ, ಪ್ರಭಾವತಿ, ದ್ರೌಪದಿ, ತಾರೆ ಮೊದಲಾದ ಸ್ತ್ರೀ ಪಾತ್ರಗಳನ್ನು ಅಸಾಮಾನ್ಯ ನೆಲೆಗಳಲ್ಲಿ ವಿಸ್ತರಿಸಬಲ್ಲ ಬಹುಶ್ರುತ ವಿದ್ವಾಂಸರು ಮೂಡಂಬೈಲು ಗೋಪಾಲಕೃಷ್ಣ ಶಾಸ್ತ್ರಿಗಳು.

ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ಮೂಡಂಬೈಲು ಚಕ್ರಕೋಡಿ ವೆಂಕಟರಮಣ ಶಾಸ್ತ್ರಿ-ಪರಮೇಶ್ವರಿ ಅಮ್ಮ ದಂಪತಿ ಪುತ್ರನಾಗಿ ಬಡತನದ ಬಾಲ್ಯದ ನಡುವೆಯೇ ಉತ್ತಮ ಶೈಕ್ಷಣಿಕ ಶಕ್ತಿಯೊಂದಿಗೆ ಬೆಳೆದು ನಿಂತವರು. ವಿದ್ವಾಂಸರಾಗಿ, ಕಲಾವಿದರಾಗಿ, ಪ್ರವಚನಕಾರರಾಗಿ, ಬರಹಗಾರರಾಗಿ ಹೆಸರಾದ ಇವರು ನಿವೃತ್ತ ಮುಖ್ಯ ಶಿಕ್ಷಕರು ಮತ್ತು ಅಂಚೆ ಪಾಲಕರಾಗಿಯೂ ದುಡಿದವರು. ಮಹಾಭಾರತ ಕೋಶ, ವಾಲ್ಮೀಕಿ ರಾಮಾಯಣ ಕೋಶ, ಕುಮಾರ ವಿಜಯ ಮೊದಲಾದ ಹಲವು ಕೃತಿಗಳನ್ನು ರಚಿಸಿದ ಅವರ ಏಕಾಂಕ ನಾಟಕಗಳೂ ಜನಪ್ರಿಯವಾಗಿದೆ.

ಕೃಪೆ : suddinews

Share





ಈ ಲೇಖನಕ್ಕೆ ನಿಮ್ಮ ಪ್ರತಿಕ್ರಿಯೆ       
Your Name : Your Email :
Your Feedback :
 
ಓದುಗರ ಪ್ರತಿಕ್ರಿಯೆಗಳು
shreeranga(11/17/2015)
Nice




ಪೂರಕ ಲೇಖನಗಳು
 



ತಾಜಾ ಲೇಖನಗಳು
 
ಇದು ಯಕ್ಷಗಾನ ಕಲೆಯ ಸ೦ಪೂರ್ಣ ಮಾಹಿತಿ ಹಾಗೂ ಪ್ರಸರಣಕ್ಕಾಗಿ ಮೀಸಲಿರುವ ಅ೦ತರ್ಜಾಲ ತಾಣ.
ಇದರಲ್ಲಿ ಪ್ರಕಟವಾಗುವ ಕೆಲವು ಲೇಖನಗಳು ಅ೦ತರ್ಜಾಲದಲ್ಲಿರುವ ಮಾಹಿತಿಗಳಿ೦ದ ಕಲೆಹಾಕಲ್ಪಟ್ಟಿದ್ದು, ಯಾವುದೇ ಕು೦ದು ಕೊರತೆಗಳಿದ್ದಲ್ಲಿ ದಯವಿಟ್ಟು ಸ೦ಪರ್ಕಿಸಿ.
ನಮ್ಮ ಬಗ್ಗೆ  |  ಲೇಖಕರ ಬಳಗ  |  ಸ೦ಪರ್ಕಿಸಿ  |  Font Help
 
© ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ