ಹುಡುಕಿ :   
ಯಕ್ಷಗಾನ
ಲೇಖನಗಳು
ಸ೦ದರ್ಶನಗಳು
ಸುದ್ದಿ ಜಾಲ
ಸುದ್ದಿ-ಸಮುಚ್ಛಯ
ಸ೦ಘಗಳು
ಪ್ರಸ೦ಗಗಳು
ಪುಸ್ತಕಗಳು
ಮೇಳಗಳು
ಹಾಡುಗಳು
ತಾಳಮದ್ದಲೆ
ದೃಶ್ಯಾವಳಿ
ವ್ಯಕ್ತಿ ವಿಶೇಷ
ಭಾಗವತರು
ಅರ್ಥಧಾರಿಗಳು
ಪುರುಷ ಪಾತ್ರಧಾರಿಗಳು
ಸ್ತ್ರೀ ಪಾತ್ರಧಾರಿಗಳು
ಹಿಮ್ಮೇಳ ವಾದಕರು
ಹಾಸ್ಯಗಾರರು
ತರಬೇತಿ
ನಮ್ಮ ಬಗ್ಗೆ ಮುಖಪುಟ
 
ಸುದ್ದಿ - ಸಮುಚ್ಛಯ
Share
ಪ್ರೋ. ಎಸ್. ವಿ. ಉದಯ ಕುಮಾರ ಶೆಟ್ಟರಿಗೆ ರಾಜ್ಯಮಟ್ಟದ ಸಹೃದಯ ಪ್ರಶಸ್ತಿ

ಲೇಖಕರು :
ಸತೀಶ್ ನಾಯಕ್ , ಪಕಳಕು೦ಜ
ಮ೦ಗಳವಾರ, ಜನವರಿ 5 , 2016
ಜನವರಿ 5, 2016

ಪ್ರೋ. ಎಸ್. ವಿ. ಉದಯ ಕುಮಾರ ಶೆಟ್ಟರಿಗೆ ರಾಜ್ಯಮಟ್ಟದ ಸಹೃದಯ ಪ್ರಶಸ್ತಿ

ಸಾಗರ : ಯಕ್ಷಗಾನ ಚಿಂತಕ, ಲೇಖಕ ಮಣಿಪಾಲದ ಎಂ. ಐ. ಟಿ ಕಾಲೇಜಿನ ಪ್ರಾಧ್ಯಾಪಕ ಪ್ರೋ. ಎಸ್. ವಿ. ಉದಯ ಕುಮಾರ ಶೆಟ್ಟರಿಗೆ ರಾಜ್ಯ ಮಟ್ಟದ ಸಹೃದಯ ಪ್ರಶಸ್ತಿಯನ್ನು ಸಾಗರದಲ್ಲಿ ನಡೆದ ಸಾಗರೋತ್ಸವ ಸಮಾರಂಬದಲ್ಲಿ ವಿಧಾನ ಸಭಾ ಅಧ್ಯಕ್ಷ ಕಾಗೋಡು ತಿಮ್ಮಪ್ಪನವರು ಪ್ರದಾನ ಮಾಡಿದರು. ಹಿರಿಯ ಸಾಹಿತಿ ನಾ. ಡಿಸೋಜ ಅಭಿನಂದನಾ ಬಾಷಣ ಮಾಡಿದರು. ಕೆಳದಿ ಸಂಸ್ಥಾನದ ರಾಜಗುರು ಡಾ/ ಮಹೇಶ್ವರ ಶಿವಾಚಾರ್ಯ ಸ್ವಾಮೀಜಿ ದಿವ್ಯ ಸಾನ್ನೀದ್ಯ ವಹಿಸಿದ್ದರು. ಶ್ರೀ ಎಂ. ಕೆ. ಶ್ರೀರಂಗಯ್ಯ ಜಿಲ್ಲಾದಿಕಾರಿಗಳು ಚಿತ್ರದುರ್ಗ, ಶ್ರೀ ಸಿಗಂದೂರು ಕ್ಷೇತ್ರದ ದರ್ಮದರ್ಶಿ ಸಿಗಂದೂರು ರಾಮಪ್ಪ, ಅರ್ಚಕ ಶೇಷಗಿರಿ ಭಟ್ ಮುಂತಾದವರು ಉಪಸ್ಥಿತರಿದ್ದರು.

ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ರಾಜ್ಯದ ವಿವಿದ ಜಿಲ್ಲೆಗಳ ಹತ್ತು ಜನ ಗಣ್ಯರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು ಯಕ್ಷಗಾನ ಕ್ಷೇತ್ರದಿಂದ ಶೆಟ್ಟರಿಗೆ ಈ ಪ್ರಶಸ್ತಿ ಸಂದಿತ್ತು. ಸಹೃದಯ ಬಳಗದ ಅದ್ಯಕ್ಷ ಜಿ. ನಾಗೇಶ್ ಸ್ವಾಗತಿಸಿದರು. ವಿವಿದ ಜಿಲ್ಲೆಗಳ ಕಲಾವಿದರಿಂದ ಭರತ ನಾಟ್ಯ, ವಿನೋದಾವಳಿ ನಗೆಹಬ್ಬ ನೆರವೇರಿತು. ಸಹಸ್ರಾರು ಪ್ರೇಕ್ಷಕರು ಭಾಗವಹಿಸಿದ್ದರು . ಸಾಗರ ಸುತ್ತ ಪತ್ರಿಕಾ ಬಳಗ ಕಾರ್ಯಕ್ರಮ ಸಂಘಟಿಸಿತ್ತು.




Share





ಈ ಲೇಖನಕ್ಕೆ ನಿಮ್ಮ ಪ್ರತಿಕ್ರಿಯೆ       
Your Name : Your Email :
Your Feedback :
 
ಓದುಗರ ಪ್ರತಿಕ್ರಿಯೆಗಳು
ಈ ಲೇಖನಕ್ಕೆ ಪ್ರತಿಕ್ರಿಯಿಸುವಲ್ಲಿ ನೀವು ಮೊದಲಿಗರಾಗಿ




ಪೂರಕ ಲೇಖನಗಳು
 



ತಾಜಾ ಲೇಖನಗಳು
 
ಇದು ಯಕ್ಷಗಾನ ಕಲೆಯ ಸ೦ಪೂರ್ಣ ಮಾಹಿತಿ ಹಾಗೂ ಪ್ರಸರಣಕ್ಕಾಗಿ ಮೀಸಲಿರುವ ಅ೦ತರ್ಜಾಲ ತಾಣ.
ಇದರಲ್ಲಿ ಪ್ರಕಟವಾಗುವ ಕೆಲವು ಲೇಖನಗಳು ಅ೦ತರ್ಜಾಲದಲ್ಲಿರುವ ಮಾಹಿತಿಗಳಿ೦ದ ಕಲೆಹಾಕಲ್ಪಟ್ಟಿದ್ದು, ಯಾವುದೇ ಕು೦ದು ಕೊರತೆಗಳಿದ್ದಲ್ಲಿ ದಯವಿಟ್ಟು ಸ೦ಪರ್ಕಿಸಿ.
ನಮ್ಮ ಬಗ್ಗೆ  |  ಲೇಖಕರ ಬಳಗ  |  ಸ೦ಪರ್ಕಿಸಿ  |  Font Help
 
© ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ