ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಯಕ್ಷಗಾನ ಕಲಾವಿದರಿಗೆ ಅವಮಾನ
ಲೇಖಕರು : ಸತೀಶ್ ನಾಯಕ್ , ಪಕಳಕು೦ಜ
ಬುಧವಾರ, ಜುಲೈ 6 , 2016
|
ಜುಲೈ 6 , 2016
|
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಯಕ್ಷಗಾನ ಕಲಾವಿದರಿಗೆ ಅವಮಾನ
ಬೆಂಗಳೂರು :
ಬುಧವಾರ ನಡೆಯಬೇಕಿದ್ದ ಯಕ್ಷಗಾನ ವಿಚಾರ ಸಂಕಿರಣವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರದ್ದು ಮಾಡಿ ಯಕ್ಷಗಾನ ಕಲಾವಿದರಿಗೆ ಅವಮಾನ ಮಾಡಿದೆ.
ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಇಂದಿನಿಂದ ಭಾನುವಾರದವರೆಗೆ ಜಾನಪದ ಯಕ್ಷಗಾನ ವಿಚಾರ ಸಂಕಿರಣವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸಿತ್ತು. ಆದರೆ ಮಂಗಳವಾರ ರಾತ್ರಿ ಇಲಾಖೆಯ ಅಧಿಕಾರಿಯೊಬ್ಬರು ಕರೆ ಮಾಡಿ ಬೇರೆ ದಿನ ಆಯೋಜನೆ ಮಾಡಿ ಎಂದು ಹೇಳಿ ಕಾರ್ಯಕ್ರಮವನ್ನು ರದ್ದು ಮಾಡಿ ಎಂದು ತಿಳಿಸಿದ್ದಾರೆ.
ಎಂಬತ್ತು ವರ್ಷದ ಹಿರಿಯ ಯಕ್ಷಗಾನ ಕಲಾವಿದರಾದ ಪದ್ಮಶ್ರೀ ಚಿಟ್ಟಾಣಿ ರಾಮಚಂದ್ರ ಹೆಗಡೆ, ರಾಜ್ಯ ಪ್ರಶಸ್ತಿ ವಿಜೇತ ಗೋವಿಂದ ಭಟ್ ಸೇರಿದಂತೆ ಹಲವು ಕಲಾವಿದರು, ಯಕ್ಷಗಾನ ವಿದ್ವಾಂಸರು ಈ ಕಾರ್ಯಕ್ರಮಕ್ಕಾಗಿ ಆಗಮಿಸಿದ್ದರು.
ಈಗಾಗಲೇ ಎರಡು ಬಾರಿ ಈ ಕಾರ್ಯಕ್ರಮ ರದ್ದು ಮಾಡಿದ್ದು, ಈಗ ಮೂರನೇ ಬಾರಿ ರದ್ದು ಮಾಡಿರುವುದು ಕಲಾವಿದರ ಆಕ್ರೋಶಕ್ಕೆ ಕಾರಣವಾಗಿದೆ. ಯಕ್ಷಗಾನ, ದೊಡ್ಡಾಟ, ಮೂಡಲಪಾಯ, ಗೊಂಬೆಯಾಟ, ವಿಚಾರ ಸಂಕಿರಣ, ಪ್ರಾತ್ಯಕ್ಷಿಕೆ, ಪ್ರರ್ದಶನ ಇತ್ಯಾದಿ ಕಾರ್ಯಕ್ರಮಗಳನ್ನು ಏರ್ಪಡಿಸಿ ಎಲ್ಲ ಸಿದ್ಧತೆ ಮಾಡಲಾಗಿತ್ತು. ರದ್ದಾದ ಹಿನ್ನಲೆಯಲ್ಲಿ ಸಂಜೆ ಕಲಾಕ್ಷೇತ್ರದಲ್ಲಿ ಯಕ್ಷಗಾನ ಕಲಾವಿದರು ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.
ಕೃಪೆ :
publictv
|
|
|