ಹುಡುಕಿ :   
ಯಕ್ಷಗಾನ
ಲೇಖನಗಳು
ಸ೦ದರ್ಶನಗಳು
ಸುದ್ದಿ ಜಾಲ
ಸುದ್ದಿ-ಸಮುಚ್ಛಯ
ಸ೦ಘಗಳು
ಪ್ರಸ೦ಗಗಳು
ಪುಸ್ತಕಗಳು
ಮೇಳಗಳು
ಹಾಡುಗಳು
ತಾಳಮದ್ದಲೆ
ದೃಶ್ಯಾವಳಿ
ವ್ಯಕ್ತಿ ವಿಶೇಷ
ಭಾಗವತರು
ಅರ್ಥಧಾರಿಗಳು
ಪುರುಷ ಪಾತ್ರಧಾರಿಗಳು
ಸ್ತ್ರೀ ಪಾತ್ರಧಾರಿಗಳು
ಹಿಮ್ಮೇಳ ವಾದಕರು
ಹಾಸ್ಯಗಾರರು
ತರಬೇತಿ
ನಮ್ಮ ಬಗ್ಗೆ ಮುಖಪುಟ
 
ಸುದ್ದಿ ಜಾಲ
Share
ಕ್ಯಾಪ್ಟನ್ ಸಿ.ಪಿ. ಕೃಷ್ಣನ್ ಪ್ರಶಸ್ತಿ ಪ್ರಧಾನ

ಲೇಖಕರು :
ಸತೀಶ್ ನಾಯಕ್ , ಪಕಳಕು೦ಜ
ಶುಕ್ರವಾರ, ಆಗಸ್ಟ್ 30 , 2013
ಕೆರೆಮನೆ ಶಿವಾನ೦ದ ಹೆಗಡೆಯವರಿಗೆ ಖ್ಯಾತ ನಟಿ ಹಾಗೂ ನೃತ್ಯಗಾರ್ತಿ ವೈಜಯಂತಿಮಾಲಾ ಬಾಲಿ ಅವರು ಕಥಕ್ಕಳಿಯಲ್ಲಿ ದೊಡ್ಡ ಹೆಸರಾದ ಮತ್ತೂರು ಗೋವಿಂದಕುಟ್ಟಿ ಹಾಗೂ ಕಲಾಮಂಡಲಂ ವಾಸು ಪಿಶಾರೊಡಿ ಮತ್ತು ಯಕ್ಷಗಾನ ಕ್ಷೇತ್ರದಲ್ಲಿ ಅದ್ಭುತ ಸಾಧನೆ ಮಾಡಿದ ಕೆರೆಮನೆ ಶಿವಾನಂದ ಹೆಗಡೆ ಅವರಿಗೆ ಕ್ಯಾಪ್ಟನ್‌ ಸಿ.ಪಿ. ಕೃಷ್ಣ ನಾಯರ್‌ ಅವರ ಹೆಸರಿನ ಪ್ರಶಸ್ತಿ ನೀಡಿ ಸನ್ಮಾನಿಸಿದರು.

ಬೆಂಗಳೂರು ಕ್ಲಬ್ ಫಾರ್ ಕಥಕ್ಕಳಿ ಅಂಡ್ ಆರ್ಟ್ಸ್‌ (ಬಸಿಕೆಎ) ವಾರ್ಷಿಕ ದತ್ತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ವೈಜಯಂತಿಮಾಲಾ ಬಾಲಿ ಸೇರಿದಂತೆ ವಿಮಲಾ ರಂಗಾಚಾರ್‌ ಹಾಗೂ ರಾಧಾಕೃಷ್ಣನ್‌ ನಂಬೂದಿರಿ ಅವರನ್ನು ಸಮಾಜಕ್ಕೆ ನೀಡಿದ ಸೇವೆಗಾಗಿ ಸನ್ಮಾನಿಸಲಾಯಿತು.

ಇವರೊಂದಿಗೆ ಮಾನಸಿಕ ಆರೋಗ್ಯ ಕುರಿತು ಸೇವೆ ಸಲ್ಲಿಸುತ್ತಿರುವ ‘ದಿ ಮೆಡಿಕೊ ಪ್ಯಾಸ್ಟೋರಲ್‌ ಒಕ್ಕೂಟ’ ಹಾಗೂ ಅಬಲಾಶ್ರಮ ನಡೆಸುತ್ತಿರುವ ಸೇವಾಸದನ ಸ್ವಯಂ ಸೇವಾ ಸಂಸ್ಥೆಗಳನ್ನೂ ಸನ್ಮಾನಿಸಿ ಗೌರವಿಸಲಾಯಿತು.

ಸ್ಟೀಫನ್‌ ದೇವಸ್ಸಿ ಹಾಗೂ ವೃಂದ ಹಾಗೂ ಮನೋಜ್‌ ಜಾರ್ಜ್‌ ಅವರ ಪಿಟೀಲು ವಾದನದ ಕಛೇರಿಯು ಎಲ್ಲರನ್ನೂ ರಂಜಿಸಿತು.



ಖ್ಯಾತ ನಟಿ ಹಾಗೂ ನೃತ್ಯಗಾರ್ತಿ ವೈಜಯಂತಿಮಾಲಾ ಬಾಲಿಯವರೊ೦ದಿಗೆ ಕ್ಯಾಪ್ಟನ್ ಸಿ.ಪಿ. ಕೃಷ್ಣನ್ ಪ್ರಶಸ್ತಿ ಪುರಸ್ಕೃತರು




ಶ್ರೀ ಕೆರೆಮನೆ ಶಿವಾನ೦ದ ಹೆಗಡೆಯವರಿಗೆ ಶ್ರೀ ಸುಧಾಕರನ್ ರಾಮ೦ತಲಿಯರಿ೦ದ ಸನ್ಮಾನ.



Share





ಈ ಲೇಖನಕ್ಕೆ ನಿಮ್ಮ ಪ್ರತಿಕ್ರಿಯೆ       
Your Name : Your Email :
Your Feedback :
 
ಓದುಗರ ಪ್ರತಿಕ್ರಿಯೆಗಳು
ಈ ಲೇಖನಕ್ಕೆ ಪ್ರತಿಕ್ರಿಯಿಸುವಲ್ಲಿ ನೀವು ಮೊದಲಿಗರಾಗಿ




ಪೂರಕ ಲೇಖನಗಳು
     



    ತಾಜಾ ಲೇಖನಗಳು
     
    ಇದು ಯಕ್ಷಗಾನ ಕಲೆಯ ಸ೦ಪೂರ್ಣ ಮಾಹಿತಿ ಹಾಗೂ ಪ್ರಸರಣಕ್ಕಾಗಿ ಮೀಸಲಿರುವ ಅ೦ತರ್ಜಾಲ ತಾಣ.
    ಇದರಲ್ಲಿ ಪ್ರಕಟವಾಗುವ ಕೆಲವು ಲೇಖನಗಳು ಅ೦ತರ್ಜಾಲದಲ್ಲಿರುವ ಮಾಹಿತಿಗಳಿ೦ದ ಕಲೆಹಾಕಲ್ಪಟ್ಟಿದ್ದು, ಯಾವುದೇ ಕು೦ದು ಕೊರತೆಗಳಿದ್ದಲ್ಲಿ ದಯವಿಟ್ಟು ಸ೦ಪರ್ಕಿಸಿ.
    ನಮ್ಮ ಬಗ್ಗೆ  |  ಲೇಖಕರ ಬಳಗ  |  ಸ೦ಪರ್ಕಿಸಿ  |  Font Help
     
    © ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ