ಚಿಟ್ಟಾಣಿ ರಾಮಚಂದ್ರ ಹೆಗಡೆ ಅವರಿಗೆ ಮುದ್ದಣ ಪ್ರಶಸ್ತಿ
ಲೇಖಕರು : ಸತೀಶ್ ನಾಯಕ್ , ಪಕಳಕು೦ಜ
ಗುರುವಾರ, ಫೆಬ್ರವರಿ 6 , 2014
|
ಫ಼ೆಬ್ರವರಿ 6, 2014
|
ಚಿಟ್ಟಾಣಿ ರಾಮಚಂದ್ರ ಹೆಗಡೆ ಅವರಿಗೆ ಮುದ್ದಣ ಪ್ರಶಸ್ತಿ
ಸಚ್ಚೇರಿಪೇಟೆ :
ನಂದಳಿಕೆ ಕವಿ ಮುದ್ದಣ ಸ್ಮಾರಕ ಮಿತ್ರ ಮಂಡಳಿ, ಶ್ರೀ ಮಹಾಲಿಂಗೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಆಶ್ರಯದಲ್ಲಿ ವರಕವಿ ಮುದ್ದಣನ 144ನೇ ಸಂಸ್ಮರಣೆ ಮತ್ತು ಅಕ್ಷರ ದಾಸೋಹ ಕಟ್ಟಡದ ಉದ್ಘಾಟನೆ ಹಾಗೂ ಕಿಣ್ಣಣ್ಣ-ಮುಣ್ಣಣ್ಣ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಯಕ್ಷಗಾನ ಕಲಾವಿದ, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಚಿಟ್ಟಾಣಿ ರಾಮಚಂದ್ರ ಹೆಗಡೆ ಅವರಿಗೆ ಮುದ್ದಣ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಈ ಸಂದರ್ಭ ಜಿಪಂ ಸದಸ್ಯರಾದ ಸುಪ್ರೀತ್ ಶೆಟ್ಟಿ ಕೆದಿಂಜೆ, ನಂದಳಿಕೆ ಚಾವಡಿ ಅರಮನೆ ಎನ್. ಸುಹಾಸ್ ಹೆಗ್ಡೆ, ತಾಪಂ ಸದಸ್ಯರಾದ ಕ್ಸೇವಿಯರ್ ಡಿಮೆಲ್ಲೋ, ಕ್ಷೇತ್ರ ಶಿಕ್ಷಣಾಧಿಕಾರಿ ಮನಮೋಹನ್ ಎಚ್.ಕೆ., ಮುದ್ದಣ ಪ್ರಕಾಶನದ ನಂದಳಿಕೆ ಬಾಲಚಂದ್ರ ರಾವ್, ಅಕ್ಷರ ದಾಸೋಹದ ಸಹಾಯಕ ನಿರ್ಧೇಶಕರಾದ ತಿಪ್ಪೇಶಪ್ಪ, ಶಾಲಾ ಸಂಚಾಲಕಿ ರಾಜೇಶ್ವರಿ ವಿ. ರಾವ್, ಕವಿ ಮುದ್ದಣ ಸ್ಮಾರಕ ಮಿತ್ರ ಮಂಡಳಿ ಅಧ್ಯಕ್ಷ ರವಿರಾಜ್ ಭಟ್, ಕಾರ್ಯದರ್ಶಿ ಅರುಣ್ ಕುಮಾರ್, ಮುಖ್ಯ ಶಿಕ್ಷಕರಾದ ವಿ.ಕೆ. ರಾವ್ ನಂದಳಿಕೆ ಉಪಸ್ಥಿತರಿದ್ದರು.
ಕೃಪೆ :
http://www.vijaykarnataka.com
|
|
|