ಸಿದ್ಧಕಟ್ಟೆ ಚೆನ್ನಪ್ಪ ಶೆಟ್ಟಿ ಅವರಿಗೆ ಶ್ರದ್ಧಾಂಜಲಿ ಸಭೆ
ಲೇಖಕರು : ಉದಯವಾಣಿ
ಮ೦ಗಳವಾರ, ಏಪ್ರಿಲ್ 8 , 2014
|
ಎಪ್ರಿಲ್ 10, 2014
|
ಸಿದ್ಧಕಟ್ಟೆ ಚೆನ್ನಪ್ಪ ಶೆಟ್ಟಿ ಅವರಿಗೆ ಶ್ರದ್ಧಾಂಜಲಿ ಸಭೆ
ನವಿಮುಂಬಯಿ :
ರಂಗಭೂಮಿ ಫೈನ್ಆರ್ಟ್ಸ್ ಅಸೋಸಿಯೇಶನ್ ನವಿಮುಂಬಯಿ ವತಿಯಿಂದ ಯಕ್ಷಗಾನ ರಂಗದ ದಿಗ್ಗಜ, ಮಾತಿನ ಮಲ್ಲ ಸಿದ್ಧಕಟ್ಟೆ ಚೆನ್ನಪ್ಪ ಶೆಟ್ಟಿ ಅವರು ಇತ್ತೀಚೆಗೆ ನಿಧನರಾಗಿದ್ದು, ಅವರಿಗೆ ಶ್ರದ್ಧಾಂಜಲಿ ಸಭೆಯು ಇತ್ತೀಚೆಗೆ ನೆರೂಲ್ ಶನಿ ಮಂದಿರದ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.
ರಂಗಭೂಮಿ ಫೈನ್ ಆರ್ಟ್ಸ್ ನವಿಮುಂಬಯಿ ಇದರ ಅಧ್ಯಕ್ಷ ವಿ. ಕೆ. ಸುವರ್ಣ ಪಡುಬಿದ್ರೆ ಅವರ ಅಧ್ಯಕ್ಷತೆಯಲ್ಲಿ ಜರಗಿದ ಸಭೆಯಲ್ಲಿ ನೆರೂಲ್ ಶನಿಮಂದಿರದ ಅಧ್ಯಕ್ಷ ಧರ್ಮದರ್ಶಿ ರಮೇಶ್ ಎಂ. ಪೂಜಾರಿ, ಯಕ್ಷಗಾನ ತಾಳಮದ್ದಳೆಯ ಪ್ರಸಿದ್ಧ ಅರ್ಥದಾರಿಗಳಾದ ಕೆ. ಕೆ. ಶೆಟ್ಟಿ ಮತ್ತು ಚಿಕ್ಕಯ್ಯ ಶೆಟ್ಟಿ, ಶನಿಮಂದಿರದ ಉಪಾಧ್ಯಕ್ಷ ಗೋಪಾಲ್ ವೈ. ಶೆಟ್ಟಿ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದು ಸಿದ್ಧಕಟ್ಟೆ ಚೆನ್ನಪ್ಪ ಶೆಟ್ಟಿ ಅವರ ಭಾವಚಿತ್ರಕ್ಕೆ ಪುಷ್ಪವೃಷ್ಟಿಗೈದು ನುಡಿನಮನ ಸಲ್ಲಿಸಿದರು.
ಹೆಗ್ಗಡೆ ಸೇವಾ ಸಂಘದ ಗೌರವ ಪ್ರಧಾನ ಕಾರ್ಯದರ್ಶಿ ಪ್ರಭಾಕರ ಹೆಗ್ಡೆ, ರಂಗಭೂಮಿಯ ಭಾಗವತರಾದ ರವಿಶಂಕರ ಆಚಾರ್ಯ, ಅನಿಲ್ ಹೆಗ್ಡೆ, ಶಿವರಾಮ ಕೋಟ್ಯಾನ್ ಅವರು ಉಪಸ್ಥಿತದ್ದು ಸಿದ್ಧಕಟ್ಟೆ ಚೆನ್ನಪ್ಪ ಶೆಟ್ಟಿ ಅವರ ಕಲಾಪ್ರಕಾರಗಳನ್ನು ಬಣ್ಣಿಸಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ಶ್ರದ್ಧಾಂಜಲಿ ಸಭೆಯಲ್ಲಿ ರಂಗಭೂಮಿಯ ಕಾರ್ಯಕಾರಿ ಸಮಿತಿಯ ಸದಸ್ಯರು, ಶನಿಮಂದಿರದ ಪೂಜಾ ಸಮಿತಿಯ ಸದಸ್ಯರು ಪಾಲ್ಗೊಂಡರು. ದಿ| ಚೆನ್ನಪ್ಪ ಶೆಟ್ಟಿ ಅವರ ಭಾವಚಿತ್ರಕ್ಕೆ ಪುಷ್ಪಾಂಜಲಿ ಅರ್ಪಿಸುವುದರೊಂದಿಗೆ ಅವರ ದಿವ್ಯಾತ್ಮಕ್ಕೆ ಚಿರಶಾಂತಿಯನ್ನು ಕೋರಲಾಯಿತು.
ಕೃಪೆ : www.udayavani.com
|
|
|