ಹುಡುಕಿ :   
ಯಕ್ಷಗಾನ
ಲೇಖನಗಳು
ಸ೦ದರ್ಶನಗಳು
ಸುದ್ದಿ ಜಾಲ
ಸುದ್ದಿ-ಸಮುಚ್ಛಯ
ಸ೦ಘಗಳು
ಪ್ರಸ೦ಗಗಳು
ಪುಸ್ತಕಗಳು
ಮೇಳಗಳು
ಹಾಡುಗಳು
ತಾಳಮದ್ದಲೆ
ದೃಶ್ಯಾವಳಿ
ವ್ಯಕ್ತಿ ವಿಶೇಷ
ಭಾಗವತರು
ಅರ್ಥಧಾರಿಗಳು
ಪುರುಷ ಪಾತ್ರಧಾರಿಗಳು
ಸ್ತ್ರೀ ಪಾತ್ರಧಾರಿಗಳು
ಹಿಮ್ಮೇಳ ವಾದಕರು
ಹಾಸ್ಯಗಾರರು
ತರಬೇತಿ
ನಮ್ಮ ಬಗ್ಗೆ ಮುಖಪುಟ
 
ಸುದ್ದಿ - ಸಮುಚ್ಛಯ
Share
ಯಕ್ಷಗಾನಕ್ಕೆ ಸರಕಾರದಿಂದ ಪ್ರೋತ್ಸಾಹ ದೊರೆಯಲಿ : ಪ್ರಭಾಕರ ಜೋಷಿ

ಲೇಖಕರು :
ಸತೀಶ್ ನಾಯಕ್ , ಪಕಳಕು೦ಜ
ಬುಧವಾರ, ಜನವರಿ 14 , 2015
ಜನವರಿ 15, 2015

ಯಕ್ಷಗಾನಕ್ಕೆ ಸರಕಾರದಿಂದ ಪ್ರೋತ್ಸಾಹ ದೊರೆಯಲಿ : ಪ್ರಭಾಕರ ಜೋಷಿ

ಕಟೀಲು : ಯಕ್ಷಗಾನ ಅಕಾಡೆಮಿಯ ಕಾರ್ಯಕ್ರಮಗಳು ಚಿಂತನೆ, ಅಧ್ಯಯನ, ಸಂಶೋಧನೆಗೆ ಪೂರಕವಾಗಿರಬೇಕು, ಸಂಗ್ಯಾ ಬಾಳ್ಯ ದೊಡಾrಟದಂತಹ ಕಲಾಪ್ರಕಾರಗಳಿಗೆ ಸರಕಾರದಿಂದ ಪ್ರೋತ್ಸಾಹ ದೊರೆಯ ದಿದ್ದರೆ ಮುಂದಿನ 10 ವರ್ಷಗಳಲ್ಲಿ ಯಕ್ಷಗಾನ ಮರೆಯಾಗಲಿವೆ ಎಂದು ಯಕ್ಷಗಾನ ವಿಮರ್ಶಕ ಡಾ| ಎಂ. ಪ್ರಭಾಕರ ಜೋಷಿ ಹೇಳಿದರು.

ಅವರು ಜ. 11 ಕಟೀಲು ದೇವಳದ ಸರಸ್ವ ತಿ ಸದನದಲ್ಲಿ ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡೆಮಿ ಹಾಗೂ ಕಟೀಲು ದೇವಳ ಶ್ರೀ ದುರ್ಗಾ ಮಕ್ಕಳ ಮೇಳ ಇದರ ಆಶ್ರಯದಲ್ಲಿ ಯಕ್ಷಗಾನ ಬಯಲಾಟ ಸಂಭ್ರಮ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಶಿಖರೋಪನ್ಯಾಸ ಭಾಷಣಗೈದು ಮಾತನಾಡಿದರು.

ಸಚಿವ ಅಭಯಚಂದ್ರ ಜೈನ್‌ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಮಷ್ಟಿಯ ಕಲೆ ಯಕ್ಷಗಾನವಾಗಿದೆ ಇದರ ಹಿಂದೆ ಇದ್ದ ಸಾಧಕರ ಶ್ರಮ ದೊಡ್ಡದು ಎಂದರು. ಕಟೀಲು ದೇವಳದ ಅರ್ಚಕರಾದ‌ ಕೆ. ಲಕ್ಷ್ಮೀನಾರಾಯಣ ಆಸ್ರಣ್ಣ, ಅನಂತ ಪದ್ಮಾನಾಭ ಆಸ್ರಣ್ಣ, ಹರಿನಾರಾಯಣದಾಸ ಆಸ್ರಣ್ಣ , ವಿದ್ವಾನ್‌ ಪಂಜ ಭಾಸ್ಕರ ಭಟ್‌, ಯಕ್ಷಗಾನ ವಿದ್ವಾಂಸ ಡಾ| ಎನ್‌. ನಾರಾಯಣ ಶೆಟ್ಟಿ , ಕಲಾವಿದ ಉಬರಡ್ಕ ಉಮೇಶ್‌ ಶೆಟ್ಟಿ , ಯಕ್ಷಗಾನ ಅಕಾಡೆಮಿಯ ಸದಸ್ಯ ಕೆ. ಎಂ. ಶೇಖರ್‌ಉಪಸ್ಥಿತರಿದ್ದರು. ತಾರಾನಾಥ ವರ್ಕಾಡಿ ವಂದಿಸಿದರು. ವಾಸುದೇವ ಶೆಣೈ ಕಾರ್ಯಕ್ರಮ ನಿರೂಪಿಸಿದರು.



ಕೃಪೆ : http://udayavani.com

Share





ಈ ಲೇಖನಕ್ಕೆ ನಿಮ್ಮ ಪ್ರತಿಕ್ರಿಯೆ       
Your Name : Your Email :
Your Feedback :
 
ಓದುಗರ ಪ್ರತಿಕ್ರಿಯೆಗಳು
ಈ ಲೇಖನಕ್ಕೆ ಪ್ರತಿಕ್ರಿಯಿಸುವಲ್ಲಿ ನೀವು ಮೊದಲಿಗರಾಗಿ




ಪೂರಕ ಲೇಖನಗಳು
 



ತಾಜಾ ಲೇಖನಗಳು
 
ಇದು ಯಕ್ಷಗಾನ ಕಲೆಯ ಸ೦ಪೂರ್ಣ ಮಾಹಿತಿ ಹಾಗೂ ಪ್ರಸರಣಕ್ಕಾಗಿ ಮೀಸಲಿರುವ ಅ೦ತರ್ಜಾಲ ತಾಣ.
ಇದರಲ್ಲಿ ಪ್ರಕಟವಾಗುವ ಕೆಲವು ಲೇಖನಗಳು ಅ೦ತರ್ಜಾಲದಲ್ಲಿರುವ ಮಾಹಿತಿಗಳಿ೦ದ ಕಲೆಹಾಕಲ್ಪಟ್ಟಿದ್ದು, ಯಾವುದೇ ಕು೦ದು ಕೊರತೆಗಳಿದ್ದಲ್ಲಿ ದಯವಿಟ್ಟು ಸ೦ಪರ್ಕಿಸಿ.
ನಮ್ಮ ಬಗ್ಗೆ  |  ಲೇಖಕರ ಬಳಗ  |  ಸ೦ಪರ್ಕಿಸಿ  |  Font Help
 
© ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ